Wednesday, August 19, 2009

ಲೆವೆಲ್ ಪ್ಲೇಯಿಂಗ್ ಫೀಲ್ಡ್ ಎಲ್ಲಿ...?

ಉತ್ತರ ಪ್ರದೇಶ ಮಂತ್ರಿ ಮಾಯಾವತಿ ಯಾವಾಗಲೂ ಏನಾದರೊಂದು ವಿವಾದ, ರಾಜಕೀಯ ನಿರ್ಣಯ, ಗಲಾಟೆ ಮಾಡಿಕೊಂಡು ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ತಾನೆ ಬಾಷಣವೊಂದರಲ್ಲಿ ತನ್ನನ್ನು ಉತ್ತರಪ್ರದೇಶದ ಕಾಂಗ್ರೆಸ್ ಅಧ್ಯಕ್ಷೆ ರೀತಾ ಬಹುಗುಣ ಜೋಶಿ ಕೆಟ್ಟದಾಗಿ ಟೀಕಿಸಿದಳು ಅನ್ನೊ ಕಾರಣಕ್ಕೆ ಅವರ ಮೇಲೆ ಅಟ್ರಾಸಿಟಿ ಕೇಸು ಹಾಕಿ ಜೈಲಿಗೆ ಅಟ್ಟಿದ್ದರು. ಈಗ ಮತ್ತೆ ಸುದ್ದಿಯಾರುತ್ತಿರೋದು ಲಕ್ನೋದಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಆನೆಗಳ ಪಾರ್ಕ್ ಮಾಡುತ್ತಿರುವುದಕ್ಕಾಗಿ. ಸದ್ಯಕ್ಕೆ ಈ ಪ್ರಕರಣ ಸುಪ್ರಿಂಕೋರ್ಟ್ ನ ಕೆಂಗಣ್ಣಿಗೆ ಗುರಿಯಾಗಿದೆ ಕೂಡ.

ಈ ಮಾಯಾವತಿ ಎಂತ ಹುಚ್ಚಿನ ಹೆಣ್ಣು ಅಂದರೆ, ತಾನು ಬದುಕಿದ್ದಾಗಲೇ ಆಕೆಗೆ ತನ್ನನ್ನು ತಾನೆ ಅಜರಾಮರ ಮಾಡಿಕೊಂಡು ಬಿಡುವ ಉಮ್ಮೇದಿ. ಅದಕ್ಕಂತಲೆ ತನ್ನ ಗುರು ಕಾನ್ಕ್ಷಿರಾಮ್, ತನ್ನ ಪಕ್ಷದ ಗುರುತು ಆನೆ, ಮತ್ತು ಸ್ವತ ತನ್ನದೆ ಪ್ರತಿಮೆ ನಿರ್ಮಿಸಲು ಮುಂದಾಗಿದ್ದಾರೆ. ಅದಕ್ಕಾಗಿ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡುತ್ತಿದ್ದಾರೆ. ಈ ಕಾರಣಕ್ಕಾಗಿ ಈಗ ಎಲ್ಲೆಡೆಯಿಂದ ಟೀಕೆ ಎದುರಿಸಬೇಕಾಗಿದೆ.

ಆಕೆ ಮಾಡುತ್ತಿರುವುದು ಸರಿಯೋ ತಪ್ಪೋ ಅನ್ನೊದು ಬೇರೆಯದೇ ಚರ್ಚೆ, ಈಗ ಸುಪ್ರಿಂ ಕೋರ್ಟ್ ನಲ್ಲಿ ಮಾಯಾವತಿಯ ಪರವಾಗಿ ರಕ್ಷಾಬಂಧನದಂತೆ ಕಾಯಬಹುದಾದ ಐಡಿಯಾ ಸಿಕ್ಕಿದೆ ಅಂತಹ ಸೂಪರ್ ಐಡಿಯಾದ ಜನಕ ಒಬ್ಬ ಕನ್ನಡಿಗ ಅನ್ನೊಂದು ವಿಶೇಷ. ದೆಹಲಿಯ ಪತ್ರಿಕೋದ್ಯಮದಲ್ಲಿ ದೊಡ್ಡ ಹೆಸರುಮಾಡಿರುವ, ಸರಿಸುಮಾರು 30 ವರ್ಷಗಳಿಂದ ದೆಹಲಿಯಲ್ಲಿ ನೆಲೆಸಿರುವ, ಹಾಸನ ಜಿಲ್ಲೆಯವರಾದ, ಅರಕಲಗೂಡು ಸೂರ್ಯಪ್ರಕಾಶ್.


ಕಳೆದ ಲೋಕಸಭಾ ಚುನಾವಣೆಗಳಿಗೂ ಮುಂಚೆ ಎ.ಸೂರ್ಯಪ್ರಕಾಶ್ ಚುನಾವಣಾ ಆಯೋಗಕ್ಕೆ ದೂರು ಕೊಟ್ಟು ದೇಶದಲ್ಲಿರೋ ಕಾನೂನಿನ ಪ್ರಕಾರ ಚುನಾವಣೆ ನಡೆಸಲು ಎಲ್ಲಾ ಪಕ್ಷಗಳಿಗೂ ಲೆವೆಲ್ ಪ್ಲೆಯಿಂಗ್ ಗ್ರೌಂಡ್ ಇರಬೇಕು. ಆದರೆ ಕಾಂಗ್ರೆಸ್ ಪಕ್ಷದ ಕಾರಣದಿಂದ ಚುನಾವಣೆಗಳಲ್ಲಿ ಸ್ಪರ್ಧಿಸಲು ಯಾವಪಕ್ಷಕ್ಕೂ ಆ ರೀತಿಯ ಪರಿಸ್ಥಿತಿ ಇಲ್ಲ, ಯಾಕಂದರೆ ದೇಶವನ್ನು ಬಹಳ ವರ್ಷ ಆಳಿದ ಕಾಂಗ್ರೆಸ್ ಪಕ್ಷ ತುಂಬಾ ವ್ಯವಸ್ಥಿತವಾಗಿ ಕಾಂಗ್ರೆಸ್ ಮತ್ತು ಗಾಂಧಿ ಪ್ಯಾಮಿಲಿ 'ಬ್ರಾಂಡ್' ಅನ್ನು ಜನರ ಮೇಲೆ ಹೇರಿದೆ. ಕೇಂದ್ರ ಸರ್ಕಾರದ ಬಹುತೇಕ ಯೋಜನೆಗಳು, ವಿವಿಧ ರಾಜ್ಯಗಳಲ್ಲಿ ನೂರಾರು ಯೋಜನೆಗಳನ್ನು ಗಾಂಧಿ ಕುಟುಂಬದವರ ಹೆಸರಿನಲ್ಲಿ ಆರಂಭಿಸಿದ್ದಾರೆ. ಸರಿಸುಮಾರು 450 ಯೋಜನೆಗಳಿಗೆ ರಾಜೀವ್, ಇಂದಿರಾ, ಜವಹರ್ ಲಾಲ್ ನೆಹರು ಅವರ ಹೆಸರನ್ನ ಇಡಲಾಗಿದೆ. ಆ ಮೂಲಕ ಸಾವಿರಾರು ಕೋಟಿ ರೂಪಾಯಿ ಹಣವನ್ನು ಈ ಯೋಜನೆಗಳ ಮೂಲಕ ವೆಚ್ಚ ಮಾಡಿ, ಕಾಂಗ್ರೆಸ್ ಮತ್ತು ಗಾಂಧಿ ಕುಟುಂಭವನ್ನು ಪ್ರಮೋಟ್ ಮಾಡಲಾಗಿದೆ ಇದೆಲ್ಲಾ ಯಾಕೆ ಅಂಥ ಪ್ರಶ್ನಿಸಿ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದರು.

ಕುಡಿಯುವ ನೀರಿಗೆ, ರಾಷ್ಟ್ರೀಯ ರಾಜೀವ್ ಗಾಂಧಿ ರಾಷ್ಟ್ರೀಯ ಕುಡಿಯುವ ನೀರು ಯೋಜನೆ ಅನ್ನೊ ಹೆಸರು.
ವಿದ್ಯುತ್ ಸರಬರಾಜಿಗೆ, ರಾಜೀವ್ ಗಾಂಧಿ ವಿದ್ಯದ್ದೀಕರಣ ಯೋಜನೆ,
ಮನೆ ಕಟ್ಟಲು ಇಂದಿರಾ ಆವಾಸ್ ಯೋಜನೆ.
ಜವಹರ್ ಲಾಲ್ ರೋಜಗಾರ್ ಯೋಜನೆ.
ಇವೆ ಅಲ್ಲ . ಕಾಲೇಜು, ಪಾರ್ಕು, ಆಸ್ಪತ್ರೆ, ಮೈದಾನ, ರಸ್ತೆ, ಪದಕ, ಪಂದ್ಯಾವಳಿ, ಸ್ಕಾಲರ್ ಶಿಪ್ಪು ಸೇರಿದಂತೆ ನೂರಾರು ಕಾರ್ಯಕ್ರಮಗಳು ಇವರ ಹೆಸರಲ್ಲೇ ಏಕೆ ಇರಬೇಕು ಗಾಂಧಿ ಕುಂಟುಂಬದವರೂ ದಿನಾ ನೋಟು ಪ್ರಿಂಟು ಮಾಡಿ ಇವನ್ನೆಲ್ಲಾ ಮಾಡಿಸಿದರಾ, ರಾಷ್ಠ್ರದ ಹಣವನ್ನೇ ಅದರ ಪ್ರಜೆಗಳಿಗಾಗಿ ಕೊಟ್ಟಿದ್ದಾರೆ.
ಕೇಂದ್ರದ ಸರ್ಕಾರದ ಇಂತಹ ಯೋಜನೆಗಳಿಗೆ ನ್ಯೂಟ್ರಲ್ ಆದ ಹೆಸರುಗಳನ್ನು ಇಡಬೇಕು, ಉದಾಹಣೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಯೋಜನೆ, ರಾಷ್ಟ್ರೀಯ ಜಲ ಯೋಜನೆ, ಅನ್ನೊಥರದ ಹೆಸರುಗಳನ್ನು ಇಡಲಿ
ಅನ್ನೊದು ಸೂರ್ಯಪ್ರಕಾಶ್ ವಾಧ.

ಇದೇ ವಿಶಯವನ್ನಿಟ್ಟುಕೊಂಡು ಸೂರ್ಯಪ್ರಕಾಶ್ ಕಳೆದ ಎರಡು ಮೂರು ವರ್ಷಗಳಿಂದ ಇದನ್ನ ಇನ್ವೆಸ್ಟಿಗೇಟ್ ಮಾಡುತ್ತಿದ್ದಾರೆ, ದೇಶದ ಪ್ರತಿ ರಾಜ್ಯದಿಂದ ಮಾಹಿತಿ ಕಲೆಹಾಕಿದ್ದಾರೆ, ಎಷ್ಟು ಹಣ ಈ ಯೋಜನೆಗಳ ಹೆಸರಲ್ಲಿ ವೆಚ್ಚವಾಗಿದೆ ಅನ್ನೊ ಮಾಹಿತಿ ಪಡೆದು ಚುನಾವಣಾ ಆಯೋಗದ ಮುಂದೆ ಕಂಪ್ಲೇಂಟು ಕೊಟ್ಟು ಕಾಯುತ್ತಿದ್ದಾರೆ. ಚುನಾವಣೆ ಮುಗಿದರೂ ಚುನಾವಣಾ ಆಯೋಗದಿಂದ ಉತ್ತರ ಬಂದಿಲ್ಲ.

ಯಾಕಂದರೆ ಅದು ಗಾಂಧಿ ಪ್ಯಾಮಿಲಿ. ಅದೇ ಮಾಯಾವತಿ ಕೇಸು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ವಾಧ ವಿವಾದ ನಡೆಯುತ್ತಿದೆ, ಕೇಸು ಸುಪ್ರಿಂಕೋರ್ಟಿನಲ್ಲಿದೆ. ಆದರೆ ಮಾಯಾವತಿ ಪರ ವಾಧ ಮಾಡುತ್ತಿರುವ ಸತೀಶ್ ಮಿಶ್ರಾ, ಈಗ ಕನ್ನಡಿಗ ಸೂರ್ಯಪ್ರಕಾಶ್ ಅವರ ಅದ್ಯಯನವನ್ನು ತಮ್ಮ ಕೇಸಿನಲ್ಲಿ ಬಳಸಿಕೊಂಡಿದ್ದಾರೆ. ಮೊದಲು ಗಾಂಧಿ ಪ್ಯಾಮಿಲಿ ಕೂಡ ಸರ್ಕಾರದ ಹಣವನ್ನ ಗಾಂಧಿ ಪ್ಯಾಮಿಲಿ ಹೆಸರಿಗೆ ಬಳಸಿಕೊಂಡಿದೆ. ಮೊದಲು ಅವರ ಹೆಸರಿನ ಯೋಜನೆಗಳಿಂದ ಅವರ ಹೆಸರು ಕಿತ್ತು ಹಾಕಿ ಅಂತ ಕೇಳುತ್ತಿದ್ದಾರೆ. ಕೋರ್ಟು ಏನು ಮಾಡುತ್ತೋ ಗೊತ್ತಿಲ್ಲ.

ಅಂದ ಹಾಗೆ, ಅರಕಲಗೂಡು ಸೂರ್ಯಪ್ರಕಾಶ್ ಎಪ್ಪತ್ತರ ದಶಕದಲ್ಲಿ ಬೆಂಗಳೂರಿನ ಇಂಡಿಯನ್ ಎಕ್ಸಪ್ರೆಸ್ಸಿನಲ್ಲಿ ವರದಿಗಾರರಾಗಿದ್ದವರು. ನಂತರ ದೆಹಲಿಗೆ ಬಂದು ಇಂಡಿಯನ್ ಎಕ್ಸಪ್ರೆಸ್ಸಿನ ಬ್ಯೂರೋ ಚೀಫ್, ಈ ನಾಡು ಪತ್ರಿಕೆಯ ಪೊಲಟಿಕಲ್ ಎಡಿಟರ್, ಪಯನೀರ್ ಪತ್ರಿಕೆ ಸಂಪಾದಕ, ಪಯನೀರ್ ಜರ್ನಲಿಸಂ ಸ್ಕೂಲಿನ ಪೌಂಡರ್ ಸೇರಿದಂತೆ ಹಲವು ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸಿದವರು. ಅಡ್ವಾಣಿಯವರ ಆತ್ಮಕಥನ ಮೈಕಂಟ್ರಿ ಮೈ ಲೈಪ್ ಪುಸ್ತಕ ಬರೆಯುವಾಗ ಅಡ್ವಾಣಿಗೆ ನೆರವಾಗಿದ್ದವರು. ಸರಿಸುಮಾರು ನಲವತ್ತು ವರ್ಷಗಳನ್ನು ಪತ್ರಿಕೊದ್ಯಮದ ಗರಡಿ ಮನೆಯಲ್ಲಿ ಸವೆಸಿದವರು.
ಮೊನ್ನೆ ದೆಹಲಿಯಲ್ಲಿ ಕೆಲಸ ಮಾಡುತ್ತಿರುವ ಕರ್ನಾಟಕದ ಹೊಸ ತಲೆಮಾರಿನ ಪತ್ರಕರ್ತರೊಂದಿಗೆ ಅವರು ಮಾತಿಗೆ ಸಿಕ್ಕಿ ತಮ್ಮ ಕೆಲವು ಅನುಭವಗಳನ್ನು ಹಂಚಿಕೊಂಡರು. ಮಾತೆಲ್ಲ ಮುಗಿದ ಮೇಲೆ 'ಸಾರ್ ನಿಮ್ಮ ಬಗ್ಗೆ ನನ್ನ ಖಾಸಗಿ ಡೈರಿ ಬ್ಲಾಗ್ ನಲ್ಲಿ ಬರೀಲಾ, ಅಂದೆ. ಅದಕ್ಕವರು 'ಖಂಡಿತವಾಗಿಯೂ ಬರೆಯಪ್ಪ ಜೊತೆಗೆ ನನ್ನ ವೆಬ್ ಸೈಟಿನ ಲಿಂಕ್ ಕೊಡು ಆಸಕ್ತಿ ಇದ್ದವರೆಲ್ಲಾ ಓದಲಿ' ಅಂದರು.
ಲಿಂಕ್ ಇಲ್ಲಿವೆ.
http://www.asuryaprakash.com/



5 comments:

  1. nijakku ondu valid aada vishayada bagge soorya prakash tamma dani ettiddaare.jana saamnyana duddalli sarkaara nadeso ivaru avaravara hesarannu prasiddi maadkottaavare...ellaru pakka 420gale...

    ReplyDelete
  2. ಸೂರ್ಯಪ್ರಕಾಶ್ ಅವರು ಒಳ್ಳೆ ಪಾಯಿಂಟ್ ಹಿಡಿದಿದ್ದಾರೆ... ಸ್ವತಂತ್ರ ಬಂದು ಇಷ್ಟು ವರ್ಷ ಅದ್ರು ಗಾಂಧೀಜಿಗಿಂತ ಜಾಸ್ತಿ ಕೊನೇಲಿ ಗಾಂಧೀ ಹೆಸರು ಇಟ್ಕೊಂದಿರೋವ್ರೆ ಜಾಸ್ತಿ publicity ತಗೊಂಡಿದರೆ.. ಇಂಡಿಯಾ ಇರೋವರೆಗೂ ಕಾಂಗ್ರೆಸ್ ಇರುತ್ತೆ.. ಅಲ್ಲಿ ನೆಹರು ಫ್ಯಾಮಿಲಿನೆ ಇಂಡಿಯಾ ಆಳುತ್ತೆ.. ರೋಡ್ ಮಾಡ್ಸುತ್ತೆ,ನೀರು ಬಿಡ್ಸುತ್ತೆ.. ಮನೆ ಕಟ್ಸುತ್ತೆ.. ನಾವು ಎಲ್ಲ ನೆಹರು ಅವರ ನೆರಳಲ್ಲೇ ಬದ್ಕಿರ್ತಿವಿ.. ನೆಹರು ಸೂರು ಬಿಟ್ಟು ಹೋಗಲ್ಲ ನಮ್ಮನ್ನ..

    ReplyDelete
  3. hai srinivas,
    please see halliyimda.nlogspot.com also. he is in remote village, but wrote about it on Aug 16th itself!
    varsa.sagar@gmail.com

    ReplyDelete
  4. Dear Srinivas,
    I am very grateful to u for giving good read, regarding Arkalgud Suryaprakash, I am very happy to say, that gentle men is from my native. At the time of Loksabha Elections-09 he is visited Arkalgud.Onemore interesting thing Dr.Arkalgud Ramadas who lead the medical team to Prime Minister Dr.Manmohan Singh's bypass surgery, is brother of Suryaprakash.

    ReplyDelete
  5. Dear.Seenu,
    ಪ್ರತಿಯೊಂದು ಬಾರಿಯೂ ಹೊಸ ಹೊಸ ವಿಷಯವನ್ನು ನಮಗೆ ತಿಳಿಸುತಿದಿಯ.ನಿನ್ನ
    kaasagi diary alii ninna kaasagi matters allade ಪ್ರಸ್ತುತ ವಿದ್ಯಮಾನಗಳ ಬಗ್ಗೆ ನಮಗೆಲ್ಲ ಅರಿವು ಮುಡಿಸುತಿದಿಯ.

    ReplyDelete