Wednesday, September 23, 2009

'ಅರ್ಧ ದೆಲ್ಲಿಯ ಮಾಲೀಕ'

ಖುಷ್ವಂತ್ ಸಿಂಗ್ ಗೊತ್ತಲ್ಲಾ ಅಂತ ನಾನೇನಾದರೂ ಕೇಳಿದರೇ ನೀವು, ಯಾಕಪ್ಪಾ, ಹೇಗಿದೆ ಮೈಗೆ ಅಂತ ಕೇಳುತ್ತೀರಿ. ಆದರೆ ಅವರಪ್ಪಾ ಯಾರೂ ಗೊತ್ತಾ ಅಂತ ಕೇಳಿದರೆ ಗೊತ್ತಿಲ್ಲಾ ಬಿಡ್ರಿ, ಅದೆಲ್ಲಾ ಯಾಕೆ ಅಂತ ಅನ್ನುತ್ತೀರೇನೋ...

ಪತ್ರಕರ್ತ, ಇತಿಹಾಸಕಾರ, ಸಾಹಿತಿ ಹೀಗೆ ಏನೆಲ್ಲಾ ಆಗಿರುವ ಖುಷ್ವಂತ್ ಸಿಂಗ್ ರ ಅಪ್ಪ ಶೋಭಾ ಸಿಂಗ್ ನ್ಯೂಡೆಲ್ಲಿ ಅಂತ ಕರೆಯಲ್ಪಡುವ ದೆಹಲಿಯ ಪ್ರಮುಖ ಆಕರ್ಷಣೆಗಳಾಗಿರುವ ರಾಷ್ಠ್ರಪತಿ ಭವನ(ಕೆಲವು ಭಾಗ), ಇಂಡಿಯಾಗೇಟ್, ಕನ್ನಾಟ್ ಪ್ಲೇಸ್ , ರೆಡ್ ಕ್ರಾಸ್ ಬಿಲ್ಡಿಂಗ್, ಸೌಥ್ ಬ್ಲಾಕ್ ಸೇರಿದಂತೆ ಹತ್ತಾರು ಹಲವು ಆಕರ್ಷಣೀಯ ಸ್ಮಾರಕಗಳು ಮತ್ತು ಕಟ್ಟಡ ನಿರ್ಮಾಣಗಳ ಕಂಟ್ರಾಕ್ಟರ್ ಆಗಿದ್ದವರು.

1911 ರಲ್ಲಿ ಆಗಿನ ವೈಸ್ ರಾಯ್ ಸರ್ಕಾರ ಕಲ್ಕತ್ತಾದಿಂದ ದೆಹಲಿಗೆ ರಾಜದಾನಿ ಸ್ಥಳಾಂತರ ಮಾಡುವ ತೀರ್ಮಾನ ಕೈಗೊಂಡಾಗ ಇಂಗ್ಲೇಂಡಿನಲ್ಲಿ ಹೆಸರುವಾಸಿಯಾಗಿದ್ದ, ಎಡ್ವಿನ್ ಲೂಟಿಯಾನ್, ಮತ್ತು ಹಬ್ಬರ್ ಬೇಕರ್ ಎಂಬ ಆರ್ಕಿಟೆಕ್ಚ್ ಗಳನ್ನು ಕರೆಸಿ ಹೊಚ್ಚ ಹೊಸ, ಅದ್ಬುತ ರಾಜಧಾನಿ ಕಟ್ಟುವ ಸೂಚನೆ ನೀಡಿದರು. ಅದರ ನಿರ್ಮಾಣದ ಗುತ್ತಿಗೆ ಸಿಕ್ಕಿದ್ದು ತಂದೆ ಮಕ್ಕಳಾದ ಸುಜಾನ್ ಸಿಂಗ್ ಮತ್ತು ಶೋಭಾ ಸಿಂಗ್ ಗೆ. ಸುಜಾನ್ ಸಿಂಗ್ ಹಿಂದಿನಿಂದಲೂ ಹೆಸರುವಾಸಿ ಕಂಟ್ರಾಕ್ಟರ್ ಆಗಿದ್ದರಂತೆ.

ಈಗಿನ ರಾಷ್ಠ್ರಪತಿ ಭವನ ಕಟ್ಟಿದ್ದು ಆಗಿನ ವೈಸ್ ರಾಯ್ ವಾಸಕ್ಕಾಗಿ, ಸೌಥ್ ಬ್ಲಾಕ್ ನಾರ್ಥ್ ಬ್ಲಾಕ್, ಎಲ್ಲವೂ ನಿರ್ಮಾಣವಾಗಿದ್ದು ಬ್ರಿಟೀಷರ ಸೌಖ್ಯಕ್ಕಾಗಿಯೇ, ರಾಷ್ಠ್ರಪತಿ ಭವನ ನಿರ್ಮಾಣಕ್ಕೆ 17 ವರ್ಷ ಹಿಡಿಯಿತು, ಬಹುಶ ಆಂಗ್ಲರಿಗೆ ತಾವು ಒಂದಲ್ಲಾ ಒಂದು ದಿನ ಭಾರತವನ್ನು ಬಿಟ್ಟು ಮನೆಗೆ ನಡೆಯಬೇಕು ಎಂಬ ಕಲ್ಪನೆಯೇ ಇರಲಿಲ್ಲ. ಗುಲಾಮಿ ಬಾರತದಲ್ಲಿ ತಮ್ಮ ಅಧಿಕಾರ ನಿರಂತರ ಎಂಬ ಕಲ್ಪನೆ ಇದ್ದಿದ್ದರಿಂದಲೇ ಬ್ರಿಟೀಷರು ಇಂತಹ ನಿರ್ಮಾಣಕ್ಕೆ ಕೈ ಹಾಕಿದ್ದರು ಎನ್ನಲಾಗುತ್ತದೆ.340 ವಿವಿಧ ಹಾಲ್ ಗಳುಳ್ಳ ರಾಷ್ಠ್ರಪತಿ ಭವನ ನಿರ್ಮಾಣಕ್ಕೆ ಆಗಿನ ಕಾಲಕ್ಕೆ ರಾಷ್ಟ್ರಪತಿ ಭವನ ನಿರ್ಮಾಣಕ್ಕೆ ತಗುಲಿದ ವೆಚ್ಚ 14 ಮಿಲಿಯನ್ ಪೌಂಡ್ ಗಳು. ರಾಷ್ಠ್ರಪತಿ ಭವನದ ಕ್ಲೀನಿಂಗ್ ನಿಂದ ಹಿಡಿದು ಉಸ್ತುವಾರಿ ತನಕ ಎಲ್ಲಕ್ಕೂ 2000 ಮಂದಿ ಕೆಲಸಕ್ಕೆ ಇದ್ದರಂತೆ.

ರಾಷ್ಠ್ರಪತಿ ಭವನ ಮತ್ತು ಹೊಸ ದೆಹಲಿಯ ಪ್ರಮುಖ ಪ್ಲಾನರ್ ಆಗಿದ್ದ ಎಡ್ವಿನ್ ಲೂಟಿಯಾನ್ ಗೆ ವೈಸ್ ರಾಯ್ ಭವನ ನಿರ್ಮಾಣಕ್ಕೆ ಭಾರತೀಯ ಶೈಲಿ ಬಳಸಲು ಕೊಂಚವೂ ಇಷ್ಟ ಇರಲಿಲ್ಲವಂತೆ ಆದರೆ ಆಗಿನ ವೈಸ್ ರಾಯ್ ಹಾರ್ಡಿಂಗ್ ಕನಿಷ್ಠ ವೈಸ್ ರಾಯ್ ಮನೆಯ ಹೊರ ವಿನ್ಯಾಸವಾದರೂ ಭಾರತೀಯ ಶೈಲಿಯಲ್ಲಿರಬೇಕು ಎಂದು ಪಾರ್ಮಾನು ಹೊರಡಿಸಿದ್ದರಿಂದ ಹೊರವಿನ್ಯಾಸ ದೇಸಿ, ಒಳವಿನ್ಯಾಸ ಬ್ರಿಟಿಷ್ ಶೈಲಿಯಲ್ಲಿದೆ.

ಖುಷ್ವಂತ್ ಸಿಂಗರ ಅಪ್ಪ ಶೋಭಾ ಸಿಂಗ್ ನನ್ನ(ಆದಾ ದಿಲ್ಲಿ ಕಾ ಮಾಲಿಕ್) ಅರ್ಧ ಡೆಲ್ಲಿಯ ಓಡೆಯ ಅಂತ ಕರೆಯುತ್ತಿದ್ದರಂತೆ, ಆಗಿನ ಕಾಲಕ್ಕೆ ದೇಶದಲ್ಲೇ ಶ್ರೀಮಂತನಾಗಿದ್ದ ಆತ ಪ್ರತಿ ಅಡಿ ಜಮೀನಿಗೆ 2 ರೂಪಾಯಿ ರೇಟಿಗೆ ಅರ್ಧ ದೆಹಲಿಯನ್ನೇ ಕೊಂಡುಕೊಂಡಿದ್ದನಂತೆ.

ನಾನು ದೆಹಲಿಗೆ ಬಂದು ಇನ್ನೇನು ಒಂದು ವರ್ಷ ಆಗುತ್ತಾ ಬರುತ್ತಿದೆ, ಬಂದ ದಿನದಿಂದ ಇಲ್ಲಿಯವರೆಗೆ ದೆಹಲಿ ಎಂಬ ಬೆಡಗನ್ನು ಬೆರಗಿನಿಂದ ನೋಡುತ್ತಾ ಇದ್ದೇನೆ, ಯಾಕಪ್ಪಾ ಇದೇ ಊರನ್ನು ಕ್ಯಾಫಿಟಲ್ ಸಿಟಿ ಮಾಡಿದರು ಅನ್ನುವುದರಿಂದ ಹಿಡಿದು. 10 ಜನಪತ್ ನ ವೈಶಿಷ್ಠ ಏನು, ಚಾಂದಿನಿ ಚೌಕ್ ನಲ್ಲಿ ವಿಶೇಷವಾಗಿ ಏನು ಸಿಗುತ್ತೆ ಅನ್ನುವ ತನಕ ಕುತೂಹಲದಿಂದ ಸಿಕ್ಕ ಸಿಕ್ಕವರಲ್ಲಿ ವಿಚಾರಿಸಿಕೊಂಡಿದ್ದೇನೆ. ಕೆಲವಕ್ಕೆ ಉತ್ತರ ಸಿಕ್ಕಿವೆ ಇನ್ನು ಕೆಲವಕ್ಕೆ ಸಿಕ್ಕಿಲ್ಲ
ಇಂತಹ ಹಲವು, ವೈಶಿಷ್ಠ್ಯಗಳನ್ನು, ವಿಚಾರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ವಿಚಾರವಿದೆ.

Sunday, September 6, 2009

ಉಳ್ಳವರು ಆಗುವರೇನಯ್ಯಾ....?



ಎಂ.ಪಿ. ಪ್ರಕಾಶರ ಒಡನಾಡಿಯಾಗಿರುವ ನನ್ನ ಗೆಳೆಯ ಅನಿಲ್ ಇವತ್ತು ಬೆಳಿಗ್ಗೆ ನನಗೆ ಪೋನ್ ಮಾಡಿ ಹೇಗಿದ್ದೀರಿ ಗೌಡ್ರೇ ಅಂತ ವಿಚಾರಿಸಿದ, ನೀವೇನಪ್ಪಾ ಪತ್ರಕರ್ತರು ಜೀವಮಾನ ಪೂರ್ತಿ ಪ್ರಶ್ನೆ ಹಾಕಿಕೊಂಡೇ ಮಜವಾಗಿ ಇರ್ತಿರಿ ಅಂದ. ನಾನು ನಕ್ಕು 'ಹೌದು ಅನೀಲ್ ಪತ್ರಕರ್ತರಿಗೆ ಸಿಗೋ ಅತಿದೊಡ್ಡ ಸೌಭಾಗ್ಯವೇ ಪ್ರಶ್ನೆ ಹಾಕೋದು. ಈ ವೃತ್ತಿಯಿಂಜ ಕನಿಷ್ಟ ನಮ್ಮ 'ಇಗೋ' ನಾದರೂ ತೃಪ್ತಿಯಾಗುತ್ತೆ' ಅಂದೆ. ಅದಕ್ಕೆ ಪ್ರತಿಕ್ರಿಯಿಸಿದ ಅನಿಲ್ 'ಮೊನ್ನೆ ದೆಹಲಿಗೆ ಬಂದಿದ್ದಾಗ ನೋಡಿದೆ ಕಣಪ್ಪಾ, ನೀನು ಕ್ಯಾಬಿನೆಟ್ ಧರ್ಜೆಯ ಮಂತ್ರಿಯೊಬ್ಬನಿಗೆ ಕಾಲ ಮೇಲೆ ಕಾಲು ಹಾಕಿಕೊಂಡು ಏನ್ರೀ ಸಮಾಚಾರ ಅಂತ ಕೇಳಿದ್ದು' ಅಂದ. ಅದಕ್ಕೆ ನಾನು ಹೇಳಿದೆ. I am Journalist because I enjoy More Demacracy with in Democracy ' ಅಂಥ.

ಭಾನುವಾರದ ಮುಂಜಾನೆಯೇ ಅನಿಲ್ ನೊಂದಿಗಿನ ನನ್ನ ಸಂಭಾಷಣೆ ನನ್ನೊಳಗೆ ಹಲವು ಪ್ರಶ್ನೆಗಳನ್ನು ಎತ್ತಿದ್ದವು. ಕೆಲವಕ್ಕೆ ಉತ್ತರ ಸಿಗದೆ ಗೊಂದಲಕ್ಕೆ ಬಿದ್ದೆ ಅವನ್ನ ಇಲ್ಲಿ ಹರವಿದ್ದೇನೆ.

ಯಾರಾದರೂ ಉದ್ಯಮಿಗಳ ಮಕ್ಕಳು ಪತ್ರಕರ್ತರಾಗಿದ್ದಾರಾ?
ಯಾರಾದರೂ ರಾಜಕಾರಣಿಗಳ ಮಕ್ಕಳು ಪತ್ರಕರ್ತರು ಇದ್ದಾರಾ?
ತುಂಬಾ ಹೆಸರು ಮಾಡಿದ ಸಿನೆಮಾ ನಟರ ಮಕ್ಕಳು ಪತ್ರಕರ್ತರು ಆಗಿದ್ದಾರಾ?
ಕೈತುಂಬಾ ಹಣ ದುಡಿಯುವ ವ್ಯಾಪಾರಿಗಳ ಮಕ್ಕಳು ಆಗಿದ್ದಾರಾ ?
ಸರ್ಕಾರದ ಆಯಕಟ್ಟಿನ ಉದ್ಯೋಗದಲ್ಲಿ ಇದ್ದವರ ಮಕ್ಕಳು, ಖಾಸಗಿ ಕ್ಷೇತ್ರದಲ್ಲಿ ಸಾಕಷ್ಟು ಸಂಪಾದನೆ ಇರುವ ನೌಕರಿಯಲ್ಲಿ ಇರುವವರ ಮಕ್ಕಳು ಪತ್ರಕರ್ತರು ಆಗಿದ್ದಾರ? ಕಟ್ಟಕಡೆಗೆ ಹಣವಂತರ ಮಕ್ಕಳು ಯಾರಾದರೂ ಪತ್ರಿಕಾ ನೌಕರಿಯನ್ನ ಸೀರಿಯಸ್ಸಾಗಿ ತೆಗೆದುಕೊಂಡಿದ್ದಾರಾ ಎಂಬ ಪ್ರಶ್ನೆಯನ್ನನನಗೆ ನಾನೇ ಕೇಳಿಕೊಂಡೆ.

ಸದ್ಯದ ಪರಿಸ್ಥಿತಿಯಲ್ಲಿ ನಾನು ಬಲ್ಲ, ನನಗೆ ಗೊತ್ತಿರುವ ವಲಯದಲ್ಲಿ ಯಾರೂ ಅಂತಹವರು ಇರುವುದು ನನಗೆ ಗುರುತು ಸಿಗಲಿಲ್ಲ.
ಕಡೆಗೆ ನಾನು ಓದಿದ ಕಾಲೇಜುಗಳಲ್ಲಿ ಜರ್ನಲಿಸಂ ಅನ್ನು ನನ್ನ ಜೊತೆಗೆ ಕಲಿತವರನ್ನು, ವೃತ್ತಿಯ ಬಗ್ಗೆ ಒಂತರಾ ಪ್ಯಾಸಿನೇಟ್ ಆಗಿದ್ದವರ ಬಗ್ಗೆ ಯೋಚಿಸಿದೆ. ಬಹುತೇಕರು ಇಲ್ಲಿ ಸಿಗುವ ಅನುಭವಕ್ಕಾಗಿ ಕೆಲಕಾಲ ಕೆಲಸ ಮಾಡಿ ಬೇರೆ ಕೆಲಸ ಹುಡುಕಿಕೊಂಡರು. ಮತ್ತೆ ಕೆಲವು ಹುಡುಗಿಯರು ವಿದೇಶಗಳಲ್ಲಿ ಕೆಲಸದಲ್ಲಿರುವ ಹುಡುಗರೊಂದಿಗೆ ಮದುವೆಯಾಗಿ ಹೋದರು.

ನನ್ನ ಖಾಸಗಿ ವಲಯದಲ್ಲಿ ಅನುಭವಕ್ಕೆ ಬಂದತೆ ಉಳ್ಳವರು ಮಾದ್ಯಮದ ಉದ್ಯೋಗಗಳಲ್ಲಿ ತೊಡಗುವುದು ಕಡಿಮೆ.
ನಿಮ್ಮ ವಲಯದಲ್ಲಿ ಅಂತವರೂ ಇದ್ದರೂ ಇರಬಹುದು. ಆದರೆ ಅಂತಹ ಉದಾಹರಣೆಗಳು ತೀರಾ ಕಡಿಮೆ ಅನ್ನೊದು ನನ್ನ ನಂಬಿಕೆ.

ಯಾಕೆ ಹೀಗೆ, ಪತ್ರಕರ್ತರು ಕೇವಲ ಬಡವರು, ಮದ್ಯಮ ವರ್ಗದವರು, ರೈತರ ಮಕ್ಕಳು ಮಾಡೋ ಕೆಲಸವಾ. ವ್ಯವಸ್ಥೆಯ ಮೇಲೆ ಕೋಪ ಬೇರೆಯವರಿಗೆ ಯಾಕೆ ಬರೋದಿಲ್ಲಾ ಅಂಥ. ಈ ಸಮಾಜ ಎಲ್ಲರಿಗೂ ಸೇರಿದ್ದು ಅಲ್ಲವಾ. ರಾಜಕಾರಣಿಯ ಮಗ, ಉದ್ಯಮಿಯ ಮಗ ಯಾಕೆ ಪತ್ರಕರಾಗಿ ಅವರ ಅಪ್ಪಂದಿರನ್ನು ಪ್ರಶ್ನೆ ಮಾಡಬಾರದು,
ಆದರೆ ಇವರೇ ಶ್ರೀಮಂತರು, ಮಾದ್ಯಮದ ಉದ್ಯಮಿಗಳಾಗುತ್ತಾರೆ ಯಾಕೆ,

ಇವತ್ತು ಸಣ್ಣದೊಂದು ಮಾದ್ಯಮ ಸಂಸ್ಥೆಯನ್ನು ಹುಟ್ಟುಹಾಕುವುದೂ ನೂರಾರು ಕೋಟಿ ವಿಚಾರ. ಬಡ ಉದ್ಯೋಗಿಗಳು ಇಂತಹ ಸಾಹಸ ಮಾಡುವುದು ಸಾದ್ಯವಾ ಹೇಳಿ, ಸತ್ಯ, ನಿಷ್ಠೆ. ಪ್ರಾಮಾಣಿಕತೆ, ಇವೆಲ್ಲವೂ ಈಗ ಅಶಕ್ತರ ಸ್ವತ್ತುಗಳಾಗಿ ಬದಲಾಗಿದ್ದಾರೂ ಹೇಗೆ. ಯಾವ ಮಾದ್ಯಮದ ಒಡೆಯ ತನ್ನ ಪತ್ರಿಕೆಯ ನೌಕರ ಇಂತ ಕೆಲಸ ಮಾಡಿದ್ದಾನೆ, ಎಷ್ಟು ದೊಡ್ಡ ವ್ಯಕ್ತಿಗೆ ಪ್ರಶ್ನೆ ಕೇಳಿ ದಬಾಯಿಸಿದ್ದಾನೆ ಎಂಬ ಕಾರಣಕ್ಕಾಗಿ ಭಲೆ, ವರದಿಗಾರ ಭಲೆ ಅಂತ ಬೆನ್ನು ತಟ್ಟುತ್ತಾನೆ ಹೇಳಿ.

ಹಾಗೆ ನೋಡಿದರೆ ಮಾದ್ಯಮದಲ್ಲಿ ದುಡಿಯುವ ಮಂದಿಗೆ ಪತ್ರಿಕೋದ್ಯಮ ಆದರ್ಶವಾಗಿದ್ದರೂ, ಅದರ ಓಡೆಯರಿಗೆ ಅದೊಂದು ಲಾಭ ತರುವ ಉದ್ಯಮ ಮಾತ್ರ ಆಗಿರಲಿಕ್ಕೆ ಸಾಕು. ನಮ್ಮೆಲ್ಲ ಪತ್ರಕರ್ತರ ಸತ್ಯ ಆದರ್ಶ, ನಿಷ್ಟೆ, ಸಾಮಾಜಿಕ ಜವಾಬ್ಧಾರಿ, ಎಲ್ಲವೂ ಕೂಡ ಮಾದ್ಯಮ ಉದ್ಯಮಿಯೊಬ್ಬನ ಬಂಡವಾಳದ ಒಂದು ಬಾಗ ಆಗಿರುತ್ತದೆ, ಎಷ್ಟೊಂದು ಒಳ್ಳೆಯ, ಚುರಾಕಾದ, ಪ್ರಕಾಂಡ, ಬುಂದಿವಂತ ಪತ್ರಕರ್ತರು ಇದ್ದಾರೆ ಅನ್ನೊದು ಆಯಾ ಮಾದ್ಯಮದ ಬಂಡವಾಳದ ಪರಿದಿಯಲ್ಲೆ ಅಡಗಿದೆ ಅನಿಸುತ್ತದೆ.

ಕಾನೂನಿನ ಪ್ರಕಾರ ಯಾರೊಬ್ಬರಿಗೂ ಪತ್ರಿಕಾ ಉದ್ಯಮದಲ್ಲಿ ತೊಡಗುವ ಸ್ವಾತಂತ್ರ ಇದೆ, ಆದರೂ ಅದು ವಾಸ್ತವ ಸುಲಭದ ಸಂಗತಿ ಅಲ್ಲ ಅನ್ನೊದನ್ನ ಬಹುತೇಕರು ಒಪ್ಪುವ ಸಂಗತಿ. ಪತ್ರಿಕೊದ್ಯಮವನ್ನು ನೊಬೆಲ್ ಪ್ರೊಫೆಷನ್ ಅನ್ನುವ ಕಾಲ ಕಳೆದು ಹೊಗಿದೆ ಅಂತ ಅನಿಸುತ್ತೆ. ಗಾಂಧಿ, ಅಂಬೇಡ್ಕರರು ಪತ್ರಿಕೊದ್ಯಮವನ್ನು ಹೋರಾಟಕ್ಕೆ ಬಳಸಿಕೊಂಡ ಕಾಲ ಮತ್ತೆ ಬರುತ್ತದಾ ಅನ್ನೊ ಅನುಮಾನಗಳು ಇವೆ.

ಸಮಾಜದ ಅಶಕ್ತರು, ಬಡವರು, ಮದ್ಯಮ ವರ್ಗದವರಿಗೆ ಮಾತ್ರ ಪತ್ರಿಕೊದ್ಯಮವೊಂದು ಪ್ರಭಾವಿ ನೌಕರಿ ಅನ್ನಿಸುತ್ತಿದೆ, ಬೇರೆ ಯಾರಿಗೂ ಅಲ್ಲ ಅನ್ನೊದು ನನ್ನ ಬಲವಾದ ನಂಬಿಕೆ, ಬಹುಶ ನಿಮಗೂ ಹಾಗೆ ಅನ್ನಿಸುತ್ತೆ ಅನ್ನೊದು ನನ್ನ ಗ್ರಹಿಕೆ.
ಯಾವಾಗ ರಾಜಕಾರಣಿಯ ಮಗ, ಉದ್ಯಮಿಯ ಮಗ, ವ್ಯಾಪಾರಿಯ ಮಗ, ಶ್ರೀಮಂತನ ಮಗ ಪತ್ರಕರ್ತರಾಗಿ, ನಮ್ಮೊಂದಿಗೆ ನಿಂತು, ಪ್ರಶ್ನೆಗೆ ಉತ್ತರ ಕೇಳುವ ಪ್ರಸಂಗ ಬರುತ್ತದೋ ಅವತ್ತು ಮಾದ್ಯಮ ವೃತ್ತಿಯನ್ನ ಆದರ್ಶದ ವೃತ್ತಿ ಅಂತ ನಾವೆಲ್ಲ ಒಪ್ಪಬಹುದೇನೋ......!!

Tuesday, September 1, 2009

ಕಡೇ ಗುಳಿಗಿ.



ಲೋಕಸಭಾ ಚುನಾವಣೆಗಳು ಮುಗಿದು ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಹಜವಾಗೇ ಡೆಲ್ಲಿ ಬಣಗುಡುತ್ತಿದೆ. ಮಾಹಾಚುನಾವಣೆಯ ರಂಗಿಗೆ ಅಡ್ಡಾಗಿದ್ದ ಊರು ದಿಡೀರ್ ಅಂತ ಕ್ಷೋಬೆಗೆ ಒಳಗಾದಂತೆ ಅನ್ನಿಸುವ ಸಮಯಕ್ಕೆ ಮತ್ತೆ ಬಿಜೆಪಿಯಲ್ಲಿ ಎದ್ದ ಅಂತರಿಕ ಕಲಹದಿಂದ ಮತ್ತೆ ರಾಜಕೀಯ ರಂಗೇರಿತ್ತು.

ಈಗ ಎಲ್ಲೆಲ್ಲೂ ಬಿಜೆಪಿಯದೇ ಸುದ್ದಿ, ಹೇಗಿದ್ದ ಪಕ್ಷಕ್ಕೆ ಏನಾಯ್ತಪ್ಪ ಅನ್ನೋ ಚರ್ಚೆ.

ಚುನಾವಣೆಗಳಲ್ಲಿ ಸೋತ ಪಕ್ಷದಲ್ಲಿ ಇಂತ ಪ್ರಕ್ರಿಯೆಗಳು ಆಗೋದು ಸಹಜ. ಸೋತಾಗಲೇ ವಾಸ್ತವ ಗೊತ್ತಾಗೋದು ಅನ್ನೊದಕ್ಕೆ ಈಗಿನ ಬಿಜೆಪಿಯೇ ಉದಾಹರಣೆ, ಹೊಟ್ಟೆ ಒಳಗಿನ ಕ್ಯಾನ್ಸರ್ ಎಷ್ಠು ದಿನಾ ಅಂಥ ಗೊತ್ತಾಗದೇ ಇರುತ್ತೇ ಹೇಳಿ.

ಮೊದಲೇ ಮಸಾಲ ಸುದ್ದಿಯೇ ಇಲ್ಲದೆ ಬೇಜಾರಾಗಿದ್ದ ಮೀಡಿಯಾಗಳಿಗೆ ಈಗ ಬಿಜೆಪಿ ಒಳ್ಳೇ ಅಹಾರ ಒದಗಿಸುತ್ತಿದೆ. ಸ್ವೈನ್ ಪ್ಲೂ ಭೂತವನ್ನು ಸಿಕ್ಕಾಪಟ್ಟೆ ದುರುಪಯೋಗ ಮಾಡುತ್ತಿದ್ದ ಮಾದ್ಯಮಗಳ ಕಣ್ಣು, ಜಸ್ವಂತ್ ಸಿಂಗ್ ಬಿಟ್ಟ ಜಿನ್ನಾ ಭೂತದ ಕಡೆಗೆ ಹೊರಳಿದ್ದು ಒಳ್ಳೆಯದೇ ಆಯ್ತು ಅನ್ನಿ.

ಬಿಜೆಪಿ ಚುನಾವಣೆಗಳಲ್ಲಿ ಅಕರಾಳ ವಿಕರಾಳವಾಗಿ ಸೋತಾಗಲೇ, ಇನ್ನು ಮುಂದೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬಿಜೆಪಿಯನ್ನ ಟೇಕ್ ಓವರ್ ಮಾಡುತ್ತೆ ಅನ್ನೊ ಚರ್ಚೆ ಎದ್ದಿತ್ತು. ಆದರೆ ಅದನ್ನ ಈಗ ಆರ್ ಎಸ್ ಎಸ್ ಈಗ ಮಾಡುತ್ತಿದೆ. ಹಾಗೆ ಮಾಡೋದರಲ್ಲಿ ತಪ್ಪೇನು ಇರಲಾರದು. ಆದರೆ ಎಲ್ಲವನ್ನೂ ಜಗತ್ತಿಗೆ ಗೊತ್ತಾಗುವಂತೆ ಮಾಡುತ್ತಲೇ, 'ಸಂಘಕ್ಕೊ ಬಿಜೆಪಿಗೂ ಸಂಭಂದವಿಲ್ಲ', 'ಆರ್ ಎಸ್ ಎಸ್ ಸಾಂಸ್ಕೃತಿಕ ಸಂಘಟನೆ ರಾಜಕೀಯ ಮಾಡೋಲ್ಲ' ಅಂತೆಲ್ಲಾ ಪುಂಗಿ ಊದಿದರೇ ಆಗೋ ಲಾಭ ಅದೇನೋ ನನಗೆ ತಿಳಿಯೋಲ್ಲ.

ಹಾಗೆ ನೋಡಿದರೆ ಬಿಜೆಪಿಯಲ್ಲಿ ಚುನಾವಣೆಗಳು ಮುಗಿದ ಮೂರು ತಿಂಗಳಿಗೆ ಪಕ್ಷದಲ್ಲಿ ಅಂತರಿಕ ಕಲಹ ಬೀದಿಗೆ ಬಂದಿರೋದು ಕಾಂಗ್ರೆಸ್ ಪಾಲಿಗೆ ಕೆಟ್ಟ ಬೆಳವಣಿಗೆಯೇ ಸರಿ. ಮುಂದೆ ಚುನಾವಣೆಗಳು ಬರೋದು ಐದು ವರ್ಷಕ್ಕೆ ಆದರಿಂದ ಈಗಲೇ ಅಂತರಿಕ ಬಿಕ್ಕಟ್ಟು ಶಮನವಾಗಿ ಬಿಜೆಪಿ ಪಕ್ಷ ಚೇತರಿಸಿಕೊಂಡು ಮತ್ತೆ ಪ್ರಭಲ ಆಗಬಹುದು.

ಅದೆಲ್ಲ ಒತ್ತಟ್ಟಿಗೆ ಇರಲಿ, ಬಿಜೆಪಿ ಪಕ್ಷ ಮೀಡಿಯಾ ಕ್ರಿಯೇಟೆಡ್ ಪಕ್ಷ ಅದನ್ನ ಮೀಡಿಯಾದವರೇ ಹಾಳುಮಾಡುತ್ತಾರೆ ಅಂತ ಹೇಳುತ್ತಾರೆ. ಹಿಂದೊಮ್ಮೆ ಅರುಣ್ ಶೌರಿಯೇ ಬಿಜೆಪಿ ಪಕ್ಷ ಆರು ಜನ ಪತ್ರಕರ್ತರಿಂದ ನಿಯಂತ್ರಿಸಲ್ಪಡುತ್ತಿದೆ ಅಂತ ಟೀಕೆ ಮಾಡಿದ್ದರು. ಹಾಗೆ ನೊಡಿದರೆ ಬಿಜೆಪಿಯಲ್ಲಿದ್ದಷ್ಟು ಮಾಜಿ ಪತ್ರಕರ್ತರು, ಅಥವಾ ನ್ಯೂಸ್ ರೂಂಗಳಲ್ಲಿ ಕುಳಿತೇ ಬಿಜೆಪಿಯನ್ನು ಅಂತರಸಾಕ್ಷಿಯಿಂದ ಬೆಂಬಲಿಸುವ ಪತ್ರಕರ್ತರು ದೇಶದ ಯಾವ ಪಕ್ಷಕ್ಕೂ ಇರಲಿಕ್ಕಿಲ್ಲ. ಆರ್ ಎಸ್ ಎಸ್ ಮೂಲದಿಂದ ಬಂದ ಸಾವಿರಾರು ಮಂದಿ ಸುದ್ದಿ ಮನೆಗಳಲ್ಲಿ ಕುಳಿತು ಸದ್ದಿಲ್ಲದೆ ಸುದ್ದಿ ಮಾಡುತ್ತಾರೆ.

ಅದಕ್ಕೆ ನನಗೆ ಸಿಕ್ಕ ಸಾಕ್ಷ ಏನಪ್ಪಾ ಅಂದರೆ, ಮೊನ್ನೆ ಬಿಜೆಪಿಯಲ್ಲಿ ಗದ್ದಲ ತೀರ್ವಗೊಂಡಿದ್ದಾಗ ಪತ್ರಕರ್ತ ಮಿತ್ರನೊಬ್ಬನ ಮೊಬೈಲ್ ಗೆ ಆರ್ ಎಸ್ ಎಸ್ ಕೇಂದ್ರ ಕಚೇರಿಯಿಂದ ಒಂದು ತುರ್ತು ಸಂದೇಶ ಬಂತು.
ಸಂದೇಶ ಏನಪ್ಪಾ ಅಂದರೆ. 'ಎಲ್ಲಾ ಸ್ವಯಂ ಸೇವಕ ಪತ್ರಕರ್ತರೂ ಸಂಜೆ 3 ಗಂಟೆಗೆ ಸಂಘದ ಕಚೇರಿಗೆ ಬನ್ನಿ ಬಹುಮುಖ್ಯವಾದ ವಿಷಯ ಚರ್ಚಿಸಬೇಕಿದೆ' ಅಂತ.

ನನಗಂತೂ ಸಂದೇಶ ನೋಡಿ ಅಚ್ಚರಿಯಾಯ್ತು, ಹೇಗೆ ಆರ್ ಎಸ್ ಎಸ್ ಕಬಂದಬಾಹುಗಳು ಹರಡಿವೆ ಅಂತ ಯೋಚಿಸುವಂತಾಯಿತು. 'ಸ್ವಯಂ ಸೇವಕ' ಪತ್ರಕರ್ತರಿಗೆ ಆರ್ ಎಸ್ ಎಸ್ ಪಂಡಿತರು ಏನೇನು ಹೇಳಿದರು, ಕಲಿಸಿಕೊಟ್ಟರು ಅನ್ನೊ ಕುತೂಹಲ ಈಗ ನನಗೆ ಹೆಚ್ಚಾಗಿದೆ. ಸ್ವಯಂ ಸೇವಕರು ಅದನ್ನೆಲ್ಲಾ ಬಿಚ್ಚಿ ಹೇಳುತ್ತಾರಾ ಗೊತ್ತಿಲ್ಲ.

ಕಡೇ ಗುಳಿಗಿ.
ಕೆಲವರು ಬೆಳೆಯುತ್ತಾ ಬೆಳೆಯುತ್ತಾ ಚಡ್ಡಿ ಹಾಕಿಕೊಳ್ಳುತ್ತಾರೆ, ಮತ್ತೆ ಕೆಲವರು ಹುಟ್ಟುವಾಗಲೇ ಚಡ್ಡಿ ಹಾಕಿಕೊಂಡೇ ಹುಟ್ಟಿರುತ್ತಾರೆ...!!