Saturday, January 23, 2010

ಮನೆಗಳೂ ಮುರಿದಿವೆ, ಮನಗಳೂ ಮುರಿದಿವೆ.

ಲೇದನ್ನಾ ಮಾಕಿ ಚಾಲಾ ನಪ್ಪಿ ಉಂದಿ, ಮಮ್ಮಲನ್ನಿ ಈ ಆಂಧ್ರವಾಳ್ಳು ಚಾಲಾ ಚಾಂಡಲಂಗ ನಡಿಪಿಚ್ಚಿಕೊನ್ಯಾರು, ಸಿನಿಮಾಲೋ ಮಾ ತೆಲಂಗಾಣಾ ಭಾಷಾನ್ನಿ ವಿಲನ್ಸ್ ಕಿ ಇಸ್ತಾರು, ತೆಲಂಗಾಣ ಏಮನ್ನಾ ಇಸ್ತೆ ಇಪ್ಪಡೇ ಇವ್ವಾಲಿ ಲೇಕ ಪೋತೆ ಎಪ್ಪಡು ಇವ್ವರು, ಇದಿ ಪೈನಲ್ ಬ್ಯಾಟಲ್ ಅನ್ನ. ಆಂಧ್ರ ಪ್ರದೇಶದ ಎನ್.ಟಿ.ವಿ ತೆಲುಗು ಚಾನಲ್ಲಿನ ವರದಿಗಾರ ಸುರೇಶ್ ಬಾಬು ನನಗೆ ಹೇಳುತ್ತಿದ್ದ ಅವನು ಭಾವೋದ್ವೇಗಕ್ಕೆ ಒಳಗಾಗಿದ್ದನ್ನು ನಾನು ಗವನಿಸಿದೆ. ಅವನ ಮಾತಿನ ಅರ್ಥ ಏನಪ್ಪಾ ಅಂದರೆ ಇಲ್ಲಾಣ್ಣಾ ನಮಗೆ ಬಾಳಾ ನೋವಿದೆ, ನಮ್ಮನ್ನಾ ಈ ಆಂಧ್ರದವರು ಬಾಳಾ ಕೆಟ್ಟದಾಗಿ ನಡೆಸಿಕೊಂಡಿದಾರೆ, ನಾವು ತೆಲಂಗಾಣದವರು ಮಾತಾಡೋ ಭಾಷೆಯನ್ನ ಸಿನಿಮಾದಲ್ಲಿ ವಿಲನ್ ಗಳ ಬಾಯಲ್ಲಿ ಹೇಳಿಸಿ ಅವಮಾನ ಮಾಡ್ತಾರೆ, ತೆಲಂಗಾಣಾ ಏನಾದ್ರೂ ಕೊಟ್ರೇ ಈಗಲೇ ಆಗಬೇಕು, ಇಲ್ಲಾಂದ್ರೆ ಮತ್ತೆ ಯಾವತ್ತೂ ಕೊಡಲ್ಲಾ. ಅಂತ.

ಇನ್ನೊಬ್ಬ ಇದಾನೆ ಸಾಕ್ಷಿ ತೆಲುಗು ಚಾನಲ್ಲಿನ ದೆಹಲಿ ವರದಿಗಾರ ಸುಧೀರ್, ಆತ ಹೇಳುತ್ತಿದ್ದ ಡೇ ಗೌಡ ಈ ಕಾಂಗ್ರೆಸ್ ಗೌರ್ನಮೆಂಟ್ ವಾಳ್ಳನ್ನಿ ಚಪ್ಪುತೋ ಕೊಟ್ಟಾಲ್ರಾ, ತೆಲಂಗಾಣ ಇಚ್ಚೇಸ್ತಾರಂಟ. ಮಾ ರಾಜಶೇಖರ ರೆಡ್ಡಿ ಉಂಡಿ ಉಂಟೆ ವೀಳ್ಳಿನಂತಾ ದೆಂಗೇಸೇ ವಾಡು ಅಂದ. ಹಾಗಂದರೆ ಲೋ ಗೌಡ,ಈ ಕಾಂಗ್ರೆಸ್ ಗೌರ್ನಮೆಂಟ್ ನ್ನ ಚಪ್ಪಲೀಲಿ ಹೊಡಿಬೇಕು, ತೆಲಂಗಾಣ ಕೊಡ್ತಾರಂತೆ ಅದೇ ರಾಜಶೇಖರ ರೆಡ್ಡಿ ಇದ್ದಿದ್ದರೆ ಎಲ್ಲಾರ ಬಾಯಿ ಮುಚ್ಚಿಸಿಬಿಡ್ತಾ ಇದ್ದ. ಅಂತ. ಈ ಸುರೇಶ ಮತ್ತು ಸುಧೀರ್ ಇಬ್ಬರೂ ನನಗೆ ದೆಹಲಿಯಲ್ಲಿ ನನಗೆ ತೀರಾ ತಿಳಿದ ಸ್ನೇಹಿತರು ಮತ್ತು ಆ ಇಬ್ಬರೂ ಪರಸ್ಪರ ಗೆಳಯರು. ಸಾಮಾನ್ಯವಾಗಿ ನಾನು ಅವರನ್ನು ಒಟ್ಟೊಟ್ಟಿಗೆ ಇರುತ್ತಿದ್ದನ್ನು ನೋಡುತ್ತಿದ್ದೆ. ಆದರೆ ಯಾವಾಗ ಆಂಧ್ರಪ್ರದೇಶದಲ್ಲಿ ತೆಂಲಗಾಣ ವಿಷಯ ಭುಗಿಲೆದ್ದಿತೋ ಆವಾಗಲಿಂದ ಈ ಇಬ್ಬರು ಗೆಳಯರು ಪರಸ್ಪರ ಮುಖ ತಿರುಗಿಸಿಬಿಟ್ಟಿದ್ದಾರೆ. ಮಾತನಾಡುತ್ತಾರಾದರೂ ಮೊದಲಿನ ಆತ್ಮೀಯತೇ ಇಲ್ಲ ಸಹಜತೆ ಇಲ್ಲ. ಈ ಇಬ್ಬರನ್ನು ಬಲ್ಲ ನನಗೆ ತೆಲಂಗಾಣ ವಿಷಯಕ್ಕಾಗಿ ಇಬ್ಬರು ಗೆಳೆಯರಲ್ಲಿ ಉಂಟಾಗಿದ್ದ ಬಿರುಕು ನನ್ನಲ್ಲಿ ಕಳವಳಕ್ಕೆ ಕಾರಣವಾಗಿತ್ತು.

ಇದೇನಪ್ಪಾ ಆಗಿದೆ ಅಂತ ನಾನು ನನಗೆ ತಿಳಿದ ಇತರ ಸ್ನೇಹಿತರಲ್ಲಿ ವಿಚಾರಿಸಿದೆ ಆಗ ಗೊತ್ತಾಗಿದ್ದೇ ಬೇರೆ. ತೆಲಂಗಾಣ ಮತ್ತು ಸಮೈಕ್ಯ ಆಂಧ್ರಪ್ರದೇಶ ಎಂಬ ಎರಡು ಪತ್ರಕರ್ತರ ಬಣಗಳೇ ದೆಹಲಿಯಲ್ಲಿ ನಿರ್ಮಾಣವಾಗಿದೆ. ದೆಹಲಿಯಲ್ಲಿ ಕರ್ನಾಟಕದ ಪತ್ರಕರ್ತರ ಸಂಖ್ಯೆ ತೀರಾ ಕಡಿಮೆ. ಆದರೆ ತಮಿಳು ಮತ್ತು ತೆಲುಗಿನವರದು ತೀರಾ ದೊಡ್ಡ ಸಂಖ್ಯೆ, ಕಡಿಮೆ ಅಂದರೂ ನೂರು ಮಂದಿ ಇದ್ದಾರೆ. ಪ್ರತಿ ತೆಲುಗು ಚಾನಲ್ಲಿಗೂ ಇಬ್ಬರಿಂದ ಮೂರು ಮಂದಿ ವರದಿಗಾರರಿದ್ದಾರೆ. ಬಹುತೇಕ ತೆಲುಗು ಪತ್ರಿಕೆಗಳ ಎಡಿಷನ್ ಗಳು ದೆಹಲಿಯಿಂದ ಪ್ರಕಟ ಆಗುತ್ತವೆ.

ಈ ಎರಡೂ ಬಣಗಳು ತಮ್ಮ ತಮ್ಮ ಆಸಕ್ತಿಗಳ ಪರವಾಗಿ ಕೆಲಸ ಮಾಡುತ್ತವೆ. ತೆಲಂಗಾಣದ ಪರ ಇದ್ದವರು ಅದರ ಪರವಾದ ರಾಜಕಾರಣಿಗಳನ್ನು ವೈಭವೀಕರಿಸುತ್ತಾರೆ ಅದು ಇನ್ನೊಂದು ಬಣವನ್ನು ಚುಚ್ಟುತ್ತದೆ. ಇನ್ನೊಂದು ಬಣದವರು ಮಾತೆತ್ತಿದರೆ ಸಮೈಕ್ಯ ಆಂಧ್ರಪ್ರದೇಶ ಅಂತ ಬೊಬ್ಬೆಹಾಕುತ್ತಾರೆ. ಒಟ್ಟಿನಲ್ಲಿ ಎರಡೂ ಒತ್ತಡ ಗುಂಪುಗಳು ಅವುಗಳಿಗೆ ಬೇಕಾದಂತೆ ಕೆಲಸ ಮಾಡುತ್ತವೆ. ಸಾಮಾನ್ಯವಾಗಿ ಅವರ ಹೆಸರಿನ ಜೊತೆಗಿದ್ದ ಜಾತಿ ಸೂಚಕಗಳಾದ ರೆಡ್ಡಿ, ಚೌದುರಿ, ರಾವ್, ಇತ್ಯಾದಿಗಳು ಅವರಿಗೆ ಹಿಂದಿನಷ್ಠು ಈಗ ಬೇಕಾಗಿಲ್ಲ. ಈಗ ನೀವು ಆಂಧ್ರದವರ ಜೊತೆ ಮಾತಾಡುವಾಗ ಅವರು ಯಾವ ಪ್ರದೇಶಕ್ಕೆ ಸೇರಿದವರು ಎಂಬುದನ್ನು ತಿಳಿದುಕೊಂಡೇ ಮಾತಾಡಿದರೆ ತುಂಬಾ ಒಳ್ಳೆಯದು, ಇಲ್ಲಾ ಅಂದರೆ ಅಪಾಯ ಇದೆ. ನೀವೇನಾದರೂ ಅವರ ಬಾವನೆಗಳನ್ನು ನೋಯಿಸುವಂತೆ ಅವರ ವಿರುದ್ಧವಾಗಿ ಮಾತಾಡಿದರೆ ಕಷ್ಠ. ಅದೂ ಅಲ್ಲದೇ ಈ ಆಂಧ್ರ ದ ರಾಜಕಾರಣಿಗಳು ಎಷ್ಟು ಖದೀಮರಿದ್ದಾರೆ ಅಂದರೆ ತಮ್ಮ ಪರ ಮತ್ತು ವಿರುದ್ಧ ಯಾರಿದ್ದಾರೆ ಅಂತ ಗುರುತು ಮಾಡಿಕೊಂಡು ಅವರನ್ನೇ ಕರೆದು ಬೈಟ್ ಗಳು, ಸಂದರ್ಶನಗಳನ್ನು ಕೊಡುತ್ತಿದ್ದಾರೆ. ಡಿವೈಡ್ ಮಾಡಿದರೆ ತಾನೆ ಅವರಿಗೆ ಲಾಭ.

ನ್ಯೂಸ್ ರೂಂಗಳವರೆಗೆ ಹಬ್ಬಿಹೋಗಿರುವ ಈ ಜಾಡ್ಯ ಅಲ್ಲಿನ ಮನಸುಗಳನ್ನು ಮುರಿದು ಹಾಕಿರೋದಂತೂ ಸತ್ಯ.

ಆದರೆ ಬೇಸರದ ಸಂಗತಿ ಏನಪ್ಪಾ ಅಂದರೆ ವಸ್ತುನಿಷ್ಠವಾಗಿ ವಿಚಾರಗಳನ್ನು ಜನರ ಮುಂದೆ ಇಡಬೇಕಾದವರೇ ಹೀಗೆ ಕಚ್ಚಾಡಿ ಬಣಗಳಲ್ಲಿ ಕೆಲಸ ಮಾಡಿದರೆ ಆಗುವ ಗತಿ ಏನಪ್ಪಾ ಅಂತ. ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗಲ್ಲ. ಅವನ ವಿಚಾರವೇ ಸರಿಯಿಲ್ಲ ಅಂತ ಯೋಚಿಸೋದು ತಪ್ಪಾಲ್ಲವಾ…?

ಇವತ್ತು ಕೇಂದ್ರದ ಸರ್ಕಾರಕ್ಕೂ ತೆಲಂಗಾಣ ಒಂದು ಬಿಡಿಸಲಾರದ ಕಗ್ಗಂಟಾಗಿದೆ. ಸೋನಿಯಾಗಾಂಧಿ ಕೊಟ್ಟ ಮಾತನ್ನು ತಪ್ಪೊಲ್ಲ, ಈವರಗೂ ಕೊಟ್ಟ ಮಾತುಗಳನ್ನು ನಡೆಸಿಕೊಂಡಿದ್ದಾರೆ ಅಂತ ತೆಲಂಗಾಣ ವಾಧಿಗಳು ಹೇಳುತ್ತಾರೆ. ಅದೇ ಸಮೈಖ್ಯ ಆಂಧ್ರದವರು ಅದು ಇನ್ನು ಮುಗಿದ ಕತೆ. ಮುಗಿದ ಅದ್ಯಾಯ, ಹಂಗೇನಾದರೂ ಕೊಟ್ಟರೆ ಏನಾಗುತ್ತೋ ನೋಡ್ತಾ ಇರಿ ಅಂತ ಹೆದರಿಸುತ್ತಾ ಇದ್ಧಾರೆ.

.

ಹಾಗೆ ನೋಡಿದರೆ ಒಂದೇ ಭಾಷೆ ಮಾತಾಡೋ ಮಂದಿ ಯಾಕೆ ದೂರಾಗಬೇಕು ಅನ್ನೊದನ್ನು ಅರ್ಥಮಾಡಿಕೊಳ್ಳೊದೇ ಕಷ್ಠದ ವಿಚಾರ. ನಿನ್ನೆ ಮೊನ್ನೆವರೆಗೆ ಒಟ್ಟಿಗಿದ್ದವರು ಬೇರೆ ಆಗೋ ಕಾಲ ಬಂದಂತೆ ಕಾಣ್ತಾ ಇದೆ. ಅಲ್ಲಿ ಮನೆಗಳೂ ಮುರಿದಿವಂ ಮನಗಳೂ ಮುರಿದಿವೆ.